ತುಮಕೂರು : ಹಾಲಿನ ದರ, ಪೆಟ್ರೋಲ್-ಡಿಸೇಲ್ ದರ ಏರಿಕೆ ಬೆನ್ನಲ್ಲೆ KSRTC ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳ ಟಿಕೆಟ್ ದರ ಹೆಚ್ಚಾವ ಸಾಧ್ಯತೆ ಇದೆ.
ಇನ್ನು ಈ ಕುರಿತು ಈಗಾಗಲೇ ಕಾಂಗ್ರೆಸ್ ಶಾಸಕ ರಾಜು ಕಾಗೆ ಸುಳಿವು ನೀಡಿದರು. ಈ ಬೆನ್ನಲ್ಲೆ KSRTC ನಿಮಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕೂಡ ಶೇ.೧೫ ರಿಂದ ೨೦ ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಮೊನ್ನೆ ಬೋರ್ಡ್ ಮೀಟಂಗ್ ಮಾಡಿ ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಹಿಂದೆ ೨೦೧೯ರಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ ೫ ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನ ಮಾಡಬೇಕಾದರೆ ದರ ಹೆಚ್ಚಳ ಆಗಲೇ ಬೇಕು. ನೌಕರರ ವೇತನ ಪರಿಷ್ಕರಣೆ ೨೦೨೦ ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ ೨೦೨೪ ರಲ್ಲಿ ವೇತನ ಪರಿಷ್ಕರಣೆ ಮಾಡುತ್ತೇವೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ. ಕಳೆದ ತ್ರೈಮಾಸಿಕದಲ್ಲಿ KSRTC ಗೆ ೨೯೫ ಕೋಟಿ ನಷ್ಟ ಆಗಿದೆ. ೪೦ ವೋಲ್ವೋ ಬಸ್ ಗಳಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ ೬೦೦ ಸಾಮಾನ್ಯ ಬಸ್ ಗಳನ್ನು ಕೊಂಡುಕೊಳ್ಳಲಾಗಿದೆ. ೧೫ ರಿಂದ ೨೦% ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…
ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…