ತುಮಕೂರು : ಹಾಲಿನ ದರ, ಪೆಟ್ರೋಲ್-ಡಿಸೇಲ್ ದರ ಏರಿಕೆ ಬೆನ್ನಲ್ಲೆ KSRTC ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳ ಟಿಕೆಟ್ ದರ ಹೆಚ್ಚಾವ ಸಾಧ್ಯತೆ ಇದೆ.
ಇನ್ನು ಈ ಕುರಿತು ಈಗಾಗಲೇ ಕಾಂಗ್ರೆಸ್ ಶಾಸಕ ರಾಜು ಕಾಗೆ ಸುಳಿವು ನೀಡಿದರು. ಈ ಬೆನ್ನಲ್ಲೆ KSRTC ನಿಮಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕೂಡ ಶೇ.೧೫ ರಿಂದ ೨೦ ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಮೊನ್ನೆ ಬೋರ್ಡ್ ಮೀಟಂಗ್ ಮಾಡಿ ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಹಿಂದೆ ೨೦೧೯ರಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ ೫ ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನ ಮಾಡಬೇಕಾದರೆ ದರ ಹೆಚ್ಚಳ ಆಗಲೇ ಬೇಕು. ನೌಕರರ ವೇತನ ಪರಿಷ್ಕರಣೆ ೨೦೨೦ ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ ೨೦೨೪ ರಲ್ಲಿ ವೇತನ ಪರಿಷ್ಕರಣೆ ಮಾಡುತ್ತೇವೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ. ಕಳೆದ ತ್ರೈಮಾಸಿಕದಲ್ಲಿ KSRTC ಗೆ ೨೯೫ ಕೋಟಿ ನಷ್ಟ ಆಗಿದೆ. ೪೦ ವೋಲ್ವೋ ಬಸ್ ಗಳಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ ೬೦೦ ಸಾಮಾನ್ಯ ಬಸ್ ಗಳನ್ನು ಕೊಂಡುಕೊಳ್ಳಲಾಗಿದೆ. ೧೫ ರಿಂದ ೨೦% ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…