ರಾಜ್ಯ

ಜನಪರ ಕೆಲಸ ಮಾಡಲು ಕಾಂಗ್ರೆಸ್‌ಗೆ ಆಗ್ರಹಿಸಿದ್ದೇವೆ : ಪ್ರತಿಪಕ್ಷ ನಾಯಕ ಅಶೋಕ

ಬೆಂಗಳೂರು : ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಯಶಸ್ವಿಯಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್‌ನಿಂದ ಉತ್ತಮ ಹೋರಾಟ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲ ಶಾಸಕರು ಒಗ್ಗಟ್ಟಾಗಿ ಹಾಲು ಜೇನಿನಂತೆ ಕೆಲಸ ಮಾಡಿದ್ದಾರೆ. ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಿಗೆ ಎಲ್ಲರೂ ಸರಿಯಾದ ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದ ಬಗ್ಗೆ ಗೃಹ ಸಚಿವರ ಜೊತೆಗೆ ಮುಖ್ಯಮಂತ್ರಿ ಕೂಡ ಉತ್ತರ ಕೊಡುವಂತೆ ಮಾಡಿದ್ದೇವೆ. ಎರಡು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಹಾಗೂ ಸರ್ಕಾರ ಪಾಪರ್‌ ಆಗಿರುವ ಬಗ್ಗೆ ಕೇಳಿದ್ದಕ್ಕೆ ಸಿಎಂ, ಡಿಸಿಎಂ ಇಬ್ಬರೂ ಉತ್ತರ ನೀಡಿದ್ದಾರೆ ಎಂದರು.

ಧರ್ಮಸ್ಥಳ ವಿಚಾರದಲ್ಲಿ ನಡೆದ ಘಟನೆಗಳ ಬಗ್ಗೆ ಹೋರಾಟ ಮಾಡಿದ್ದರಿಂದ ಅಗೆಯುವುದು ಸ್ಥಗಿತಗೊಂಡಿದೆ. ದುಂದು ವೆಚ್ಚಕ್ಕೆ ಕಡಿವಾಣ ಬಿದ್ದು, ಮುಸುಕುಧಾರಿಯ ಬಣ್ಣ ಬಯಲಾಗಿದೆ. ಸುಜಾತ ಭಟ್‌ ವಿಚಾರ ಕೂಡ ಬಯಲಾಗಿದೆ. ಇಡೀ ಪ್ರಕರಣದ ಚಿತ್ರಣವನ್ನೇ ನಮ್ಮ ಶಾಸಕರು ಬದಲಾಯಿಸಿದ್ದಾರೆ ಎಂದರು.

ಸರ್ಕಾರಿ ಶಾಲೆಗಳ ಪರಿಸ್ಥಿತಿ, ರಸಗೊಬ್ಬರ ಹಂಚಿಕೆಯಲ್ಲಿ ಅವ್ಯವಹಾರ, ರಸ್ತೆ ಗುಂಡಿಗಳ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೇವೆ. ರಾಜ್ಯದಲ್ಲಿ ಮಳೆ ಹಾನಿಯಾಗಿದ್ದು, ನಮ್ಮಲ್ಲಿನ ಸಂತ್ರಸ್ತರಿಗೆ 95 ಸಾವಿರ ರೂ. ಹಾಗೂ ಕೇರಳಕ್ಕೆ 10 ಲಕ್ಷ ರೂ. ನೀಡಲಾಗಿದೆ. ಈ ತಾರತಮ್ಯದ ಬಗ್ಗೆಯೂ ಚಾಟಿ ಬೀಸಿದ್ದೇವೆ. ಸರ್ಕಾರದ 10 ಕೋಟಿ ರೂ. ಹಣದಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಈ ಬಗ್ಗೆಯೂ ಪ್ರಶ್ನೆ ಮಾಡಿ, ಕಿವಿ ಹಿಂಡುವ ಕೆಲಸ ಮಾಡಿದ್ದೇವೆ. ಇನ್ನು ಮುಂದೆ ರೈತರ ಪರ ಹಾಗೂ ಸಾಮಾನ್ಯ ಜನರ ಪರ ಕೆಲಸ ಮಾಡಿ ಎಂದು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.

ಒಳಮೀಸಲಾತಿ ವಿಚಾರಕ್ಕೆ ಬಿಜೆಪಿಯಿಂದ ಹೋರಾಟ ನಡೆದಿತ್ತು. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಚಾಲನೆ ನೀಡಿದ್ದರು. ಈಗಿನ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳಿದು ಸದನದಲ್ಲಿ ಮಂಡಿಸಿದೆ. ಆದರೆ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago