Mysore
17
few clouds

Social Media

ಗುರುವಾರ, 12 ಫೆಬ್ರವರಿ 2026
Light
Dark

ಟಿಕೆಟ್ ನೀಡುವ ವ್ಯತ್ಯಾಸದಿಂದಲೇ ಬಿಜೆಪಿ ಸೋಲು; ಕೇಂದ್ರದ ಕಡೆ ಬೊಟ್ಟು ಮಾಡಿದ ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಇನ್ನೂ ಎರಡರಿಂದ ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಆದರೆ ಟಿಕೆಟ್ ನೀಡುವಲ್ಲಿ ವ್ಯತ್ಯಾಸವಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಇನ್ನೇನು 20 ದಿನಗಳೇ ಕಳೆಯುತ್ತಾ ಬಂದಿವೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ 19 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯದಲ್ಲಿ 19 ಕ್ಷೇತ್ರಗಳನ್ನು ಗೆದ್ದು ಬೀಗಿದ್ದು, ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆದರೆ ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹಲವು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡು ಭಾರೀ ನಿರಾಸೆಗೊಂಡಿದೆ.

ಹೀಗಿರುವಾಗಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕಿದ್ದು, ನಾವು ಲೋಕಸಭಾ ಚುನಾವಣೆಯಲ್ಲಿ ಇನ್ನು 2-3 ಕ್ಷೇತ್ರಗಳನ್ನು ಗೆಲ್ಲಬಹುದಿತ್ತು. ಆದರೆ ಟಿಕೆಟ್ ಹಂಚಿಕೆಯಲ್ಲಿ ಭಾರೀ ವ್ಯತ್ಯಾಸವಾಯಿತು. ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಟಿಕೆಟ್ ನೀಡಿದ್ದರೆ ಇನ್ನೂ 3 ಕ್ಷೇತ್ರಗಳನ್ನು ಗೆಲ್ಲುತ್ತಿದ್ದೆವು ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.

Tags:
error: Content is protected !!