ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಇನ್ನೂ ಎರಡರಿಂದ ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಆದರೆ ಟಿಕೆಟ್ ನೀಡುವಲ್ಲಿ ವ್ಯತ್ಯಾಸವಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಇನ್ನೇನು 20 ದಿನಗಳೇ ಕಳೆಯುತ್ತಾ ಬಂದಿವೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ 19 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಾಜ್ಯದಲ್ಲಿ 19 ಕ್ಷೇತ್ರಗಳನ್ನು ಗೆದ್ದು ಬೀಗಿದ್ದು, ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆದರೆ ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹಲವು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡು ಭಾರೀ ನಿರಾಸೆಗೊಂಡಿದೆ.
ಹೀಗಿರುವಾಗಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕಿದ್ದು, ನಾವು ಲೋಕಸಭಾ ಚುನಾವಣೆಯಲ್ಲಿ ಇನ್ನು 2-3 ಕ್ಷೇತ್ರಗಳನ್ನು ಗೆಲ್ಲಬಹುದಿತ್ತು. ಆದರೆ ಟಿಕೆಟ್ ಹಂಚಿಕೆಯಲ್ಲಿ ಭಾರೀ ವ್ಯತ್ಯಾಸವಾಯಿತು. ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಟಿಕೆಟ್ ನೀಡಿದ್ದರೆ ಇನ್ನೂ 3 ಕ್ಷೇತ್ರಗಳನ್ನು ಗೆಲ್ಲುತ್ತಿದ್ದೆವು ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…