ರಾಜ್ಯ

ಗೃಹಲಕ್ಷ್ಮೀ ಹಣ ಪ್ರತಿ ತಿಂಗಳು ಕೊಡ್ತೀವಿ ಎಂದು ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಲ್ಟಾ ಹೊಡೆದಿದ್ದಾರೆ.

ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಈ ಬಗ್ಗೆ ಮಾತನಾಡಿದ ಅವರು, ನೋಡ್ರಿ ಪ್ರತಿ ತಿಂಗಳು ಹಣ ಕೊಡ್ತೀವಿ ಎಂದು ನಾವು ಹೇಳಿಲ್ಲ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತ ಎಂದು ಹಾರಿಕೆ ಉತ್ತರ ನೀಡಿದರು.

ಇನ್ನು ಗ್ರೇಟರ್‌ ಬೆಂಗಳೂರು ಮಾಡಿ ರಿಯಲ್‌ ಎಸ್ಟೇಟ್‌ ಮಾಫಿಯಾ ಮಾಡ್ತಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಉತ್ತರಿಸಿದ ಅವರು, ನಮ್ಮದು ಕಾಂಗ್ರೆಸ್‌ ಗ್ಯಾರಂಟಿ. ಆದ್ರೆ ಬಿಜೆಪಿಯದ್ದು ಪಕ್ಷದ ಗ್ಯಾರಂಟಿ ಅಲ್ಲ. ಮೋದಿಯ ಗ್ಯಾರಂಟಿ. ನಮ್ಮ ಗ್ಯಾರಂಟಿಯನ್ನೇ ಬಿಜೆಪಿ ಸರ್ಕಾರದಲ್ಲಿ ಅನುಕರಣೆ ಮಾಡ್ತಿದ್ದಾರೆ. ನರೇಗಾ ಟೀಕೆ ಮಾಡುತ್ತಿದ್ದರು. ಉಳುವವನೇ ಭೂಮಿಯ ಒಡೆಯ ತೆಗೆಯೋಕೆ ಆಯ್ತಾ? ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

35 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

1 hour ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago