ರಾಜ್ಯ

ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು: ಸಿಎಂ ಸಿದ್ದರಾಮಯ್ಯ

ವಿಜಯಪುರ: ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಹೀಗಾಗಿ ಅವರನ್ನು ನಾವೆಲ್ಲರೂ ಸ್ಮರಿಸಬೇಕು. ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ, ಇದನ್ನು ಮಾಧವಾನಂದ ಸ್ವಾಮಿಗಳು 20ನೇ ಶತಮಾನದಲ್ಲಿ ಸಾರಿ ಹೇಳಿದ್ದರು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅವರು ಇಂದು (ಜೂ.16) ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಿಸಿದ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ, ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಭಾರತದ ಶೂದ್ರರು ಕೇವಲ ಉತ್ಪಾದನೆ ಮಾಡಬೇಕಿತ್ತು. ಆದರೆ ತಾವು ಉತ್ಪಾದಿಸಿದ್ದನ್ನು ಅನುಭವಿಸುವ ಹಕ್ಕು ಮತ್ತು ಸ್ವಾತಂತ್ರ್ಯ ಇರಲಿಲ್ಲ. ಈ ಅಸಮಾನತೆ ವಿರುದ್ಧ ಶ್ರೀ ಮಾಧವಾನಂದ ಸ್ವಾಮೀಜಿಯವರು ಧ್ವನಿ ಎತ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಜನರ ಮುಕ್ತಿಗಾಗಿ ಶ್ರಮಿಸಿದರು ಎಂದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವಾದಿ ಶರಣರು 12ನೇ ಶತಮಾನದಲ್ಲಿ ಹೇಳಿದ್ದನ್ನು ಮಾಧವಾನಂದ ಪ್ರಭುಗಳು 20ನೇ ಶತಮಾನದಲ್ಲಿ ಸಾರಿದರು. ಪಾಳೇಗಾರಿಕೆಯು ಸಮಾಜಕ್ಕೆ, ಜನರ ಸ್ವಾತಂತ್ರ್ಯಕ್ಕೆ ಕಂಟಕ. ಹೀಗಾಗಿ ಬಲಾಢ್ಯರ ಕೈಯಲ್ಲಿ ಅಧಿಕಾರ ಇರಬಾರದು ಎಂದು ಮಹಾತ್ಮಗಾಂಧಿಯವರು ಹೇಳಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಭಾರತದೊಳಗಿದ್ದ ವರ್ಣ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆ ಹಾಗೂ ಭಾರತದಲ್ಲಿನ 560 ಸಂಸ್ಥಾನಗಳಲ್ಲಿ ಇದ್ದ ಒಳ ಮುನಿಸನ್ನು ಬ್ರಿಟೀಷರು ಬಳಸಿಕೊಂಡು ಭಾರತವನ್ನು ಆಳಿದರು ಎಂದು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

1 hour ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

4 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

8 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

13 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

13 hours ago