ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ನಾವೂ ಕೂಡ ಅದನ್ನು ಮಾದರಿಯಾಗಿ ತೆಗೆದುಕೊಂಡು ಮಹಿಳೆಯರನ್ನೊಳಗೊಂಡ ಪಕ್ಷ ಕಟ್ಟುವಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.
ನಿಖಿಲ್ ಕುಮಾರಸ್ವಾಮಿ ಅವರಿಗೆ ಹೊಸ ಜವಬ್ದಾರಿ ನೀಡಲಾಗಿದ್ದು, ಪಕ್ಷದ ವತಿಯಿಂದ ಕನಷ್ಠ 50ಮಹಿಳಾ ಸಮಾವೇಶಗಳನ್ನು ನಡೆಸಬೇಕು. ಮುಂದಿನ ಚುನಾವಣೆಗಳಲ್ಲಿ ಪಕ್ಷದಿಂದ 80 ಮಹಿಳೆಯರು ಚುನಾವಣೆಗೆ ನಿಲ್ಲಬೇಕು ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…