ರಾಜ್ಯ

ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು : ರೇಣುಕಾಚಾರ್ಯ

ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು ಕನಸು ಕಾಣ್ತಾ ಇದ್ದರು. ಇದು ನನ್ನ ಹೆತ್ತ ತಾಯಿ ಆಣೆಗೂ ಸತ್ಯ. ಪಕ್ಷದಲ್ಲಿ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅವರೆ ಇದ್ದರೆ ಮುಖ್ಯ ಮಂತ್ರಿ ಅಪೇಕ್ಷಿತರಾಗ್ತಾರೆ. ಹೀಗಾಗಿ ಅವರನ್ನ ಪಕ್ಷದಿಂದ ಹೊರಗಿಟ್ಟರು ಎಂದು ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬೊಮ್ಮಾಯಿ ಬಲಿಪಶು ಮಾಡಿದ್ರು. ಬೊಮ್ಮಾಯಿ ಒಬ್ಬ ಅಪ್ರತಿಮ ಬುದ್ಧಿವಂತ. ಯಡಿಯೂರಪ್ಪ ಒಬ್ಬ ದಕ್ಷ ಹೋರಾಟಗಾರ. ಹಾಲುಮತದ ಸಮಾಜದ ಈಶ್ವರಪ್ಪ ಹೊರಗಿಟ್ಟರು, ಜಗದೀಶ್ ಶೆಟ್ಟರ್‌ನ ಸೈಡ್ ಲೈನ್ ಮಾಡಿದ್ರು ನಮ್ಮಲ್ಲಿ ಒಂದು ಕಾರ್ಪೋರೇಟ್ ಟೀಮ್ ಇದೆ. ಒಬ್ಬ ಸರ್ವಾಧಿಕಾರಿಯಿಂದಲೇ ಬಿಜೆಪಿ ಈ ಮಟ್ಟಕ್ಕೆ ಬಂದಿರೋದು. ಯಾವುದೋ ಸರ್ವಾಧಿಕಾರಿಗಳಿಗೆ ನಾನು ಜಗ್ಗಲ್ಲ ಬಗ್ಗಲ್ಲ ಎಂದು ಸ್ವಪಕ್ಷದವರ ವಿರುದ್ಧವೇ ಹರಿಹಾಯ್ದಿದ್ದಾರೆ.

ಅವರದೇ ಕಡೆಯವರು ರಾಜ್ಯಸಭಾ, ವಿಧಾನ ಪರಿಷತ್, ವಿಧಾನಸಭೆ ಸದಸ್ಯರಾಗಿದ್ದಾರೆ. ಅವರೇ ರಾಜ್ಯಾಧ್ಯಕ್ಷರು, ಯುವಮೋರ್ಚಾ, ಪದಾಧಿಕಾರಿಗಳು ಅವರ ಕಡೆಯವರೇ ಆಗಿದ್ದಾರೆ. ಸಮಯ ಬಂದಾಗ ಪಟ್ಟಿ ಸಮೇತ ಅವರ ಹೆಸರು ಬಿಡುಗಡೆ ಮಾಡ್ತೀನಿ ಎಂದು ಬಿಎಲ್ ಸಂತೋಷ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

lokesh

Recent Posts

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

9 mins ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

2 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

2 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

2 hours ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 hours ago