ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು ಕನಸು ಕಾಣ್ತಾ ಇದ್ದರು. ಇದು ನನ್ನ ಹೆತ್ತ ತಾಯಿ ಆಣೆಗೂ ಸತ್ಯ. ಪಕ್ಷದಲ್ಲಿ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅವರೆ ಇದ್ದರೆ ಮುಖ್ಯ ಮಂತ್ರಿ ಅಪೇಕ್ಷಿತರಾಗ್ತಾರೆ. ಹೀಗಾಗಿ ಅವರನ್ನ ಪಕ್ಷದಿಂದ ಹೊರಗಿಟ್ಟರು ಎಂದು ತಿಳಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಬೊಮ್ಮಾಯಿ ಬಲಿಪಶು ಮಾಡಿದ್ರು. ಬೊಮ್ಮಾಯಿ ಒಬ್ಬ ಅಪ್ರತಿಮ ಬುದ್ಧಿವಂತ. ಯಡಿಯೂರಪ್ಪ ಒಬ್ಬ ದಕ್ಷ ಹೋರಾಟಗಾರ. ಹಾಲುಮತದ ಸಮಾಜದ ಈಶ್ವರಪ್ಪ ಹೊರಗಿಟ್ಟರು, ಜಗದೀಶ್ ಶೆಟ್ಟರ್ನ ಸೈಡ್ ಲೈನ್ ಮಾಡಿದ್ರು ನಮ್ಮಲ್ಲಿ ಒಂದು ಕಾರ್ಪೋರೇಟ್ ಟೀಮ್ ಇದೆ. ಒಬ್ಬ ಸರ್ವಾಧಿಕಾರಿಯಿಂದಲೇ ಬಿಜೆಪಿ ಈ ಮಟ್ಟಕ್ಕೆ ಬಂದಿರೋದು. ಯಾವುದೋ ಸರ್ವಾಧಿಕಾರಿಗಳಿಗೆ ನಾನು ಜಗ್ಗಲ್ಲ ಬಗ್ಗಲ್ಲ ಎಂದು ಸ್ವಪಕ್ಷದವರ ವಿರುದ್ಧವೇ ಹರಿಹಾಯ್ದಿದ್ದಾರೆ.
ಅವರದೇ ಕಡೆಯವರು ರಾಜ್ಯಸಭಾ, ವಿಧಾನ ಪರಿಷತ್, ವಿಧಾನಸಭೆ ಸದಸ್ಯರಾಗಿದ್ದಾರೆ. ಅವರೇ ರಾಜ್ಯಾಧ್ಯಕ್ಷರು, ಯುವಮೋರ್ಚಾ, ಪದಾಧಿಕಾರಿಗಳು ಅವರ ಕಡೆಯವರೇ ಆಗಿದ್ದಾರೆ. ಸಮಯ ಬಂದಾಗ ಪಟ್ಟಿ ಸಮೇತ ಅವರ ಹೆಸರು ಬಿಡುಗಡೆ ಮಾಡ್ತೀನಿ ಎಂದು ಬಿಎಲ್ ಸಂತೋಷ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…