ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು ಕನಸು ಕಾಣ್ತಾ ಇದ್ದರು. ಇದು ನನ್ನ ಹೆತ್ತ ತಾಯಿ ಆಣೆಗೂ ಸತ್ಯ. ಪಕ್ಷದಲ್ಲಿ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅವರೆ ಇದ್ದರೆ ಮುಖ್ಯ ಮಂತ್ರಿ ಅಪೇಕ್ಷಿತರಾಗ್ತಾರೆ. ಹೀಗಾಗಿ ಅವರನ್ನ ಪಕ್ಷದಿಂದ ಹೊರಗಿಟ್ಟರು ಎಂದು ತಿಳಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಬೊಮ್ಮಾಯಿ ಬಲಿಪಶು ಮಾಡಿದ್ರು. ಬೊಮ್ಮಾಯಿ ಒಬ್ಬ ಅಪ್ರತಿಮ ಬುದ್ಧಿವಂತ. ಯಡಿಯೂರಪ್ಪ ಒಬ್ಬ ದಕ್ಷ ಹೋರಾಟಗಾರ. ಹಾಲುಮತದ ಸಮಾಜದ ಈಶ್ವರಪ್ಪ ಹೊರಗಿಟ್ಟರು, ಜಗದೀಶ್ ಶೆಟ್ಟರ್ನ ಸೈಡ್ ಲೈನ್ ಮಾಡಿದ್ರು ನಮ್ಮಲ್ಲಿ ಒಂದು ಕಾರ್ಪೋರೇಟ್ ಟೀಮ್ ಇದೆ. ಒಬ್ಬ ಸರ್ವಾಧಿಕಾರಿಯಿಂದಲೇ ಬಿಜೆಪಿ ಈ ಮಟ್ಟಕ್ಕೆ ಬಂದಿರೋದು. ಯಾವುದೋ ಸರ್ವಾಧಿಕಾರಿಗಳಿಗೆ ನಾನು ಜಗ್ಗಲ್ಲ ಬಗ್ಗಲ್ಲ ಎಂದು ಸ್ವಪಕ್ಷದವರ ವಿರುದ್ಧವೇ ಹರಿಹಾಯ್ದಿದ್ದಾರೆ.
ಅವರದೇ ಕಡೆಯವರು ರಾಜ್ಯಸಭಾ, ವಿಧಾನ ಪರಿಷತ್, ವಿಧಾನಸಭೆ ಸದಸ್ಯರಾಗಿದ್ದಾರೆ. ಅವರೇ ರಾಜ್ಯಾಧ್ಯಕ್ಷರು, ಯುವಮೋರ್ಚಾ, ಪದಾಧಿಕಾರಿಗಳು ಅವರ ಕಡೆಯವರೇ ಆಗಿದ್ದಾರೆ. ಸಮಯ ಬಂದಾಗ ಪಟ್ಟಿ ಸಮೇತ ಅವರ ಹೆಸರು ಬಿಡುಗಡೆ ಮಾಡ್ತೀನಿ ಎಂದು ಬಿಎಲ್ ಸಂತೋಷ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…