ರಾಜ್ಯ

ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು : ರೇಣುಕಾಚಾರ್ಯ

ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು ಕನಸು ಕಾಣ್ತಾ ಇದ್ದರು. ಇದು ನನ್ನ ಹೆತ್ತ ತಾಯಿ ಆಣೆಗೂ ಸತ್ಯ. ಪಕ್ಷದಲ್ಲಿ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅವರೆ ಇದ್ದರೆ ಮುಖ್ಯ ಮಂತ್ರಿ ಅಪೇಕ್ಷಿತರಾಗ್ತಾರೆ. ಹೀಗಾಗಿ ಅವರನ್ನ ಪಕ್ಷದಿಂದ ಹೊರಗಿಟ್ಟರು ಎಂದು ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬೊಮ್ಮಾಯಿ ಬಲಿಪಶು ಮಾಡಿದ್ರು. ಬೊಮ್ಮಾಯಿ ಒಬ್ಬ ಅಪ್ರತಿಮ ಬುದ್ಧಿವಂತ. ಯಡಿಯೂರಪ್ಪ ಒಬ್ಬ ದಕ್ಷ ಹೋರಾಟಗಾರ. ಹಾಲುಮತದ ಸಮಾಜದ ಈಶ್ವರಪ್ಪ ಹೊರಗಿಟ್ಟರು, ಜಗದೀಶ್ ಶೆಟ್ಟರ್‌ನ ಸೈಡ್ ಲೈನ್ ಮಾಡಿದ್ರು ನಮ್ಮಲ್ಲಿ ಒಂದು ಕಾರ್ಪೋರೇಟ್ ಟೀಮ್ ಇದೆ. ಒಬ್ಬ ಸರ್ವಾಧಿಕಾರಿಯಿಂದಲೇ ಬಿಜೆಪಿ ಈ ಮಟ್ಟಕ್ಕೆ ಬಂದಿರೋದು. ಯಾವುದೋ ಸರ್ವಾಧಿಕಾರಿಗಳಿಗೆ ನಾನು ಜಗ್ಗಲ್ಲ ಬಗ್ಗಲ್ಲ ಎಂದು ಸ್ವಪಕ್ಷದವರ ವಿರುದ್ಧವೇ ಹರಿಹಾಯ್ದಿದ್ದಾರೆ.

ಅವರದೇ ಕಡೆಯವರು ರಾಜ್ಯಸಭಾ, ವಿಧಾನ ಪರಿಷತ್, ವಿಧಾನಸಭೆ ಸದಸ್ಯರಾಗಿದ್ದಾರೆ. ಅವರೇ ರಾಜ್ಯಾಧ್ಯಕ್ಷರು, ಯುವಮೋರ್ಚಾ, ಪದಾಧಿಕಾರಿಗಳು ಅವರ ಕಡೆಯವರೇ ಆಗಿದ್ದಾರೆ. ಸಮಯ ಬಂದಾಗ ಪಟ್ಟಿ ಸಮೇತ ಅವರ ಹೆಸರು ಬಿಡುಗಡೆ ಮಾಡ್ತೀನಿ ಎಂದು ಬಿಎಲ್ ಸಂತೋಷ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago