ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಪ್ರಾದೇಶಿಕ ಪಕ್ಷ. ಬಿಜೆಪಿ ರಾಷ್ಟ್ರೀಯ ಪಕ್ಷ. ಅವರು ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆ ಎಂದು ಕಾದುನೋಡೋಣ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ. ಬಿಜೆಪಿಯ ಕೇಂದ್ರದ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಚರ್ಚೆ ಮಾಡುತ್ತಾರೆ ಎಂದ ಅವರು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.
ಜೆಡಿಎಸ್ನಲ್ಲಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಹುದ್ದೆ ಕೊಡುವುದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಪ್ರತಿಯೊಂದು ನೆನಪಿನ ಶಕ್ತಿ ಇದೆ. ಪ್ರತಿಯೊಂದಕ್ಕೂ ಸಮಯ ಬಂದಾಗ ಪ್ರತಿಕ್ರಿಯಿಸುತ್ತೇನೆ ಎಂದರು.
ವಿಜಯಪುರದಲ್ಲಿ ಫೆ.27 ರಂದು ಜೆಡಿಎಸ್ ಸಮಾವೇಶ ನಡೆಸಲಾಗುತ್ತದೆ. ಈಗಾಗಲೇ ಅದರ ಪೂರ್ವ ಸಿದ್ಧತೆಗಳು ಪ್ರಾರಂಭವಾಗಿವೆ. ಆ ಸಮಾವೇಶದಲ್ಲಿ ಪಾಲ್ಗೊಳ್ಳಲು ನನಗೂ ಆಹ್ವಾನ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ರಾಜ್ಯದ ನೀರಾವರಿ ವಿಚಾರ ಸೇರಿದಂತೆ ಏನು ಪ್ರಸ್ತಾಪ ಮಾಡಬೇಕೊ ಅದನ್ನು ಮಾಡುತ್ತೇನೆ. ನನ್ನ ರಾಜ್ಯಸಭಾ ಅವಧಿ ಮುಗಿದರೂ ಮಾಧ್ಯಮದವರನ್ನು ಭೇಟಿಯಾಗುತ್ತೇನೆ ಎಂದು ಅವರು ಹೇಳಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…