ರಾಜ್ಯ

ಅವರ ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.

ಮುಂದೆ ಬಂಧನವಾದರೆ ರಾಜಿನಾಮೆ ನೀಡಬೇಕಾಗುತ್ತದೆಯಲ್ಲವೇ ಎನ್ನುವ ಪ್ರಶ್ನೆಗೆ, ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಅವರ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೆಬ್ಬಾಳಕರ್ ತಿಳಿಸಿದರು.

ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ಬಳಿದಿದೆ. ಜನರು ಅವರನ್ನು ಕ್ಷಮಿಸುವುದಿಲ್ಲ. ಈ ರಾಜ್ಯದ ಜನರು 5 ವರ್ಷ ಸುಭದ್ರ ಆಡಳಿತ ನಡೆಸಲು ಆಶಿರ್ವಾದ ಮಾಡಿದ್ದಾರೆ. ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 seconds ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

14 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

36 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

55 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

1 hour ago