Categories: ರಾಜ್ಯ

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಶಾಸಕ‌‌ ಬಾಲಕೃಷ್ಣ

ರಾಮನಗರ: ಪ್ರಭು ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ಅವರು ಸಮಾಜ ಸ್ವತ್ತು. ನಾವು ರಾಮನಗರದಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಜೊತೆಗೆ ರಾಮ ನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಕೂಡಾ ಹೇಳಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಸಹಮತ ನೀಡಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಿದ್ದತೆಗಳು ನಡೆಯುತ್ತಿದ್ದರೇ, ಮತ್ತೊಂದೆಡೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಕ್ರೆಡಿಟ್‌ ವಾರ್‌ ಆರಂಭಿಸಿವೆ. ಇದರ ನಡುವೆ ರಾಮಮಂದಿರ ಕಟ್ಟಲು ಕೈ ನಾಯಕರ ಚರ್ಚೆ ಮಾಡುತ್ತಿದ್ದು, ಇದಕ್ಕೆ ಪುಷ್ಠಿಯೆಂಬಂತೆ ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ರಾಮಮಂದಿರ‌ ಕಟ್ಟುವ ಚರ್ಚೆ ಬಿರುಸಾಗಿಯೇ ನಡೆಯುತ್ತಿದೆ.‌ ರಾಮನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಅಂತ ಶಾಸಕ ಇಕ್ಬಾಲ್ ಹುಸೇನ್ ಹೇಳಿದರೆ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ, ರಾಮನಗರಲ್ಲಿ ಬೃಹತ್ ರಾಮಮಂದಿರ ಕಟ್ಟಿ ಅದ್ದೂರಿಯಾಗಿ ಉದ್ಘಾಟನೆ ಮಾಡುತ್ತೇವೆ ಅಂತ ಹೇಳಿದ್ದಾರೆ.

ರಾಮ ನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧವಾಗಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಂಸದ ಡಿ.ಕೆ ಸುರೇಶ್ ಬೃಹತ್ ರಾಮಮಂದಿರ ನಿರ್ಮಾಣಕ್ಕಗಿ ಬೇಕಾಗುವ ಹತ್ತಾರು ಎಕರೆ ಭೂಮಿ ಹುಡುಕಾಟಕ್ಕೆ ಮುಂದಾಗಿದ್ದಾರೆ,‌ ಐತಿಹಾಸಿಕ ಪವಿತ್ರ ಸ್ಥಳ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರ ಅಭಿವೃದ್ಧಿ ಪಡಿಸಬೇಕು, ಹಾಗೂ ಬಹುದೊಡ್ಡ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿದೆ.

ಈ ಹಿಂದೆಯಿಂದಲೂ ರಾಮದೇವರ ಬೆಟ್ಟದಲ್ಲಿ ರಾಮೋತ್ಸವ ಮಾಡಬೇಕು ಅಂತ ಸ್ಥಳೀಯ ಶಾಸಕ‌ ಇಕ್ಬಾಲ್ ಹುಸೇನ್ ಪ್ಲ್ಯಾನ್ ಮಾಡುವ ಜೊತೆಗೆ ಇನ್ನೊಂದು ಹೆಜ್ಜೆ ಮುಂದು ಹೋಗಿ ಬೃಹತ್ ಮಟ್ಟದ ರಾಮಮಂದರಿ ನಿರ್ಮಾಣ‌ ಮಾಡೋ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಈ ವಿಷಯಕ್ಕೆ ಕೈ ನಾಯಕರು ಒಕ್ಕೊರಲಿನಿಂದ ದನಿ ಕೂಡಿಸಿದ್ದಾರೆ.

andolanait

Recent Posts

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

28 mins ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

37 mins ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

49 mins ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

1 hour ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

2 hours ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

2 hours ago