Categories: ರಾಜ್ಯ

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಶಾಸಕ‌‌ ಬಾಲಕೃಷ್ಣ

ರಾಮನಗರ: ಪ್ರಭು ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ಅವರು ಸಮಾಜ ಸ್ವತ್ತು. ನಾವು ರಾಮನಗರದಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಜೊತೆಗೆ ರಾಮ ನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಕೂಡಾ ಹೇಳಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಸಹಮತ ನೀಡಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಿದ್ದತೆಗಳು ನಡೆಯುತ್ತಿದ್ದರೇ, ಮತ್ತೊಂದೆಡೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಕ್ರೆಡಿಟ್‌ ವಾರ್‌ ಆರಂಭಿಸಿವೆ. ಇದರ ನಡುವೆ ರಾಮಮಂದಿರ ಕಟ್ಟಲು ಕೈ ನಾಯಕರ ಚರ್ಚೆ ಮಾಡುತ್ತಿದ್ದು, ಇದಕ್ಕೆ ಪುಷ್ಠಿಯೆಂಬಂತೆ ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ರಾಮಮಂದಿರ‌ ಕಟ್ಟುವ ಚರ್ಚೆ ಬಿರುಸಾಗಿಯೇ ನಡೆಯುತ್ತಿದೆ.‌ ರಾಮನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಅಂತ ಶಾಸಕ ಇಕ್ಬಾಲ್ ಹುಸೇನ್ ಹೇಳಿದರೆ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ, ರಾಮನಗರಲ್ಲಿ ಬೃಹತ್ ರಾಮಮಂದಿರ ಕಟ್ಟಿ ಅದ್ದೂರಿಯಾಗಿ ಉದ್ಘಾಟನೆ ಮಾಡುತ್ತೇವೆ ಅಂತ ಹೇಳಿದ್ದಾರೆ.

ರಾಮ ನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧವಾಗಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಂಸದ ಡಿ.ಕೆ ಸುರೇಶ್ ಬೃಹತ್ ರಾಮಮಂದಿರ ನಿರ್ಮಾಣಕ್ಕಗಿ ಬೇಕಾಗುವ ಹತ್ತಾರು ಎಕರೆ ಭೂಮಿ ಹುಡುಕಾಟಕ್ಕೆ ಮುಂದಾಗಿದ್ದಾರೆ,‌ ಐತಿಹಾಸಿಕ ಪವಿತ್ರ ಸ್ಥಳ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರ ಅಭಿವೃದ್ಧಿ ಪಡಿಸಬೇಕು, ಹಾಗೂ ಬಹುದೊಡ್ಡ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿದೆ.

ಈ ಹಿಂದೆಯಿಂದಲೂ ರಾಮದೇವರ ಬೆಟ್ಟದಲ್ಲಿ ರಾಮೋತ್ಸವ ಮಾಡಬೇಕು ಅಂತ ಸ್ಥಳೀಯ ಶಾಸಕ‌ ಇಕ್ಬಾಲ್ ಹುಸೇನ್ ಪ್ಲ್ಯಾನ್ ಮಾಡುವ ಜೊತೆಗೆ ಇನ್ನೊಂದು ಹೆಜ್ಜೆ ಮುಂದು ಹೋಗಿ ಬೃಹತ್ ಮಟ್ಟದ ರಾಮಮಂದರಿ ನಿರ್ಮಾಣ‌ ಮಾಡೋ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಈ ವಿಷಯಕ್ಕೆ ಕೈ ನಾಯಕರು ಒಕ್ಕೊರಲಿನಿಂದ ದನಿ ಕೂಡಿಸಿದ್ದಾರೆ.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

3 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

4 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

4 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

4 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

4 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

6 hours ago