ರಾಜ್ಯ

ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ ;ಸಿ.ಎಂ ಘೋಷಣೆ

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು.

ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದರು.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

11 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

11 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

16 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

20 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

20 hours ago