ರಾಜ್ಯ

2028ಕ್ಕೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ

ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

KPCC ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೌಮ್ಯ ರೆಡ್ಡಿಯವರು ಪ್ರದೇಶ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆಯರನ್ನು ಸಜ್ಜುಗೊಳಿಸಿ ಪಕ್ಷ ಸಂಘಟನೆ ಮಾಡುವ ಸಮರ್ಥ್ಯ ಸೌಮ್ಯರೆಡ್ಡಿಯವರಿಗೆ ಇದ್ದು ಈ ದಿಕ್ಕಿನಲ್ಲಿ ಮುಂದುವರೆಯಿರಿ ಎಂದು ಕರೆ ನೀಡಿದರು.

ಬಿಜೆಪಿ ಪಕ್ಷವೇ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕೃತಿಯ ವಿರೋಧಿ. ಮುಖ್ಯವಾಗಿ ಬಿಜೆಪಿ ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ. ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿತು ಎಂದು ಟೀಕಿಸಿದರು.

ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ ಎಂದು ವಿವರಿಸಿದರು.

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ನೀವು ನಮಗೆ ರಾಜಕೀಯ ಶಕ್ತಿ ಕೊಡಿ. ನಾವು ನಿಮಗೆ ಆರ್ಥಿಕ ಶಕ್ತಿ ನೀಡುವುದನ್ನು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನೂ ವಿರೋಧಿಸುತ್ತಿದೆ. ಇದಕ್ಕೆ ತಕ್ಕ ಉತ್ತರ ನೀವೇ ನೀಡಬೇಕು ಎಂದು ಕರೆ ನೀಡಿದರು.

ಸಂವಿಧಾನ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಬಿಜೆಪಿಯವರ ಗುರೂಜಿ ಸಾವರ್ಕರ್ ಸಂವಿಧಾನ ವಿರೋಧಿಸಿದ್ದರು. ಈ ಇತಿಹಾಸವನ್ನು ರಾಜ್ಯದ ಮಹಿಳೆಯರು, ಯುವತಿಯರಿಗೆ ಸರಿಯಾಗಿ ಮನದಟ್ಟು ಮಾಡಿಸಿ ಎಂದು ಕರೆ ನೀಡಿದರು.

 

ಸಮಾರಂಭದಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ , ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರುಗಳು, ಮಾಜಿ ಮಹಿಳಾ ಅಧ್ಯಕ್ಷರುಗಳು, ಶಾಸಕ ಹ್ಯಾರಿಸ್ ಸೃರಿ ಮತ್ತಿತರರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago