ರಾಜ್ಯ

ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಗಡೀಪಾರು ಮಾಡುತ್ತೇವೆ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಪಹಲ್ಗಾಮ್ ದಾಳಿಯ ಪರಿಣಾಮದ ಬಳಿಕ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶೀರದಲ್ಲಿ ಉಗ್ರರ ದಾಳಿಯಿಂದಾಗಿ ಕೇಂದ್ರ ಸರ್ಕಾರ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ. ಅದರ ಪರಿಣಾಮ ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ರದ್ದು ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನೀಯರನ್ನು ಪರಿಶೀಲಿಸಲಾಗುತ್ತಿದೆ. ಅವರ ವೀಸಾಗಳನ್ನು ರದ್ದು ಮಾಡಿ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕೇಂದ್ರ ವಿದೇಶಾಂಗ ಸಚಿವಾಲಯ ತೆಗೆದುಕೊಳ್ಳುವ ಕ್ರಮಗಳಿಗೆ ರಾಜ್ಯದ ಪೊಲೀಸರು ಸಹಕಾರ ನೀಡಲಿದ್ದಾರೆ. ಸದ್ಯಕ್ಕೆ ಪಾಕಿಸ್ತಾನಿ ಪ್ರಜೆಗಳ ವಿರುದ್ಧ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ನೆಲೆಸಿರುವವರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಅದನ್ನು ಪರಿಶೀಲಿಸಬೇಕಿದೆ. ಒಂದು ವೇಳೆ ಆ ರೀತಿ ಅಕ್ರಮವಾಗಿ ನೆಲೆಸಿದರೆ ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಶ್ಮೀರದಲ್ಲಿನ ದಾಳಿಯಲ್ಲಿ ಕೇಂದ್ರ ಗುಪ್ತಚರ ವೈಫಲ್ಯ ಇದೆ ಎಂಬುದು ಸ್ಪಷ್ಟವಾಗಿದೆ. ಅವರು ಅನೇಕ ಬಾರಿ ನಮ ರಾಜ್ಯದ ಪೊಲೀಸರಿಗೆ ಮಾಹಿತಿ ನೀಡುತ್ತಾರೆ, ನಮ್ಮಿಂದಲೂ ಮಾಹಿತಿ ತೆಗೆದುಕೊಳ್ಳುತ್ತಾರೆ. ಇದು ರಾಷ್ಟ್ರೀಯ ಭದ್ರತಾ ವಿಚಾರವಾಗಿರುವುದರಿಂದ ಕರ್ನಾಟಕವೂ ಸೇರಿದಂತೆ ಬೇರೆಲ್ಲಾ ಕಡೆ ಇರುವ ಸ್ಲೀಪರ್‍ಸೆಲ್‍ಗಳ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ಇರುತ್ತದೆ. ನಮ ರಾಜ್ಯಕ್ಕೆ ತಿಳಿಯದೇ ಇರುವ ಬಹಳಷ್ಟು ವಿಚಾರಗಳು ಕೇಂದ್ರ ಸರ್ಕಾರದ ಅರಿವಿಗಿರುತ್ತದೆ ಎಂದರು.

ರಾಜ್ಯದ ಪೊಲೀಸರಿಗೆ ಮಾಹಿತಿ ಸಿಕ್ಕರೆ ಕೇಂದ್ರ ಗುಪ್ತಚರ ಹಾಗೂ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡುತ್ತವೆ ಎಂದರು.

ಇಸ್ರೋ, ಡಿಆರ್‍ಡಿಒ ಎಲ್ಲಾ ಕಡೆ ವಿಶೇಷ ಭದ್ರತಾ ವ್ಯವಸ್ಥೆಗಳಿವೆ. ರಾಜ್ಯದ ಪೊಲೀಸರು ಅದಕ್ಕೆ ಅಗತ್ಯ ಬೆಂಬಲ ನೀಡಿರುತ್ತಾರೆ ಎಂದು ಹೇಳಿದರು.

ಭದ್ರತಾ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಜತಾಂತ್ರಿಕವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸಪಡಿಸಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವುದಾಗಿ ಹೇಳಿದರು.

ಕಲಬುರಗಿಯಲ್ಲಿ ರಸ್ತೆಯುದ್ದಕ್ಕೂ ಪಾಕಿಸ್ತಾನದ ಧ್ವಜ ಹಾಕಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

12 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

12 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

13 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

14 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

14 hours ago