ರಾಜ್ಯ

ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಗಡೀಪಾರು ಮಾಡುತ್ತೇವೆ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಪಹಲ್ಗಾಮ್ ದಾಳಿಯ ಪರಿಣಾಮದ ಬಳಿಕ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶೀರದಲ್ಲಿ ಉಗ್ರರ ದಾಳಿಯಿಂದಾಗಿ ಕೇಂದ್ರ ಸರ್ಕಾರ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ. ಅದರ ಪರಿಣಾಮ ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ರದ್ದು ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನೀಯರನ್ನು ಪರಿಶೀಲಿಸಲಾಗುತ್ತಿದೆ. ಅವರ ವೀಸಾಗಳನ್ನು ರದ್ದು ಮಾಡಿ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕೇಂದ್ರ ವಿದೇಶಾಂಗ ಸಚಿವಾಲಯ ತೆಗೆದುಕೊಳ್ಳುವ ಕ್ರಮಗಳಿಗೆ ರಾಜ್ಯದ ಪೊಲೀಸರು ಸಹಕಾರ ನೀಡಲಿದ್ದಾರೆ. ಸದ್ಯಕ್ಕೆ ಪಾಕಿಸ್ತಾನಿ ಪ್ರಜೆಗಳ ವಿರುದ್ಧ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ನೆಲೆಸಿರುವವರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಅದನ್ನು ಪರಿಶೀಲಿಸಬೇಕಿದೆ. ಒಂದು ವೇಳೆ ಆ ರೀತಿ ಅಕ್ರಮವಾಗಿ ನೆಲೆಸಿದರೆ ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಶ್ಮೀರದಲ್ಲಿನ ದಾಳಿಯಲ್ಲಿ ಕೇಂದ್ರ ಗುಪ್ತಚರ ವೈಫಲ್ಯ ಇದೆ ಎಂಬುದು ಸ್ಪಷ್ಟವಾಗಿದೆ. ಅವರು ಅನೇಕ ಬಾರಿ ನಮ ರಾಜ್ಯದ ಪೊಲೀಸರಿಗೆ ಮಾಹಿತಿ ನೀಡುತ್ತಾರೆ, ನಮ್ಮಿಂದಲೂ ಮಾಹಿತಿ ತೆಗೆದುಕೊಳ್ಳುತ್ತಾರೆ. ಇದು ರಾಷ್ಟ್ರೀಯ ಭದ್ರತಾ ವಿಚಾರವಾಗಿರುವುದರಿಂದ ಕರ್ನಾಟಕವೂ ಸೇರಿದಂತೆ ಬೇರೆಲ್ಲಾ ಕಡೆ ಇರುವ ಸ್ಲೀಪರ್‍ಸೆಲ್‍ಗಳ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ಇರುತ್ತದೆ. ನಮ ರಾಜ್ಯಕ್ಕೆ ತಿಳಿಯದೇ ಇರುವ ಬಹಳಷ್ಟು ವಿಚಾರಗಳು ಕೇಂದ್ರ ಸರ್ಕಾರದ ಅರಿವಿಗಿರುತ್ತದೆ ಎಂದರು.

ರಾಜ್ಯದ ಪೊಲೀಸರಿಗೆ ಮಾಹಿತಿ ಸಿಕ್ಕರೆ ಕೇಂದ್ರ ಗುಪ್ತಚರ ಹಾಗೂ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡುತ್ತವೆ ಎಂದರು.

ಇಸ್ರೋ, ಡಿಆರ್‍ಡಿಒ ಎಲ್ಲಾ ಕಡೆ ವಿಶೇಷ ಭದ್ರತಾ ವ್ಯವಸ್ಥೆಗಳಿವೆ. ರಾಜ್ಯದ ಪೊಲೀಸರು ಅದಕ್ಕೆ ಅಗತ್ಯ ಬೆಂಬಲ ನೀಡಿರುತ್ತಾರೆ ಎಂದು ಹೇಳಿದರು.

ಭದ್ರತಾ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಜತಾಂತ್ರಿಕವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸಪಡಿಸಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವುದಾಗಿ ಹೇಳಿದರು.

ಕಲಬುರಗಿಯಲ್ಲಿ ರಸ್ತೆಯುದ್ದಕ್ಕೂ ಪಾಕಿಸ್ತಾನದ ಧ್ವಜ ಹಾಕಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago