ಬೆಂಗಳೂರು: ಎಚ್ಡಿ ಕುಮಾರಸ್ವಾಮಿಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಮಾತನಾಡಿದ ಅವರು, ಶಾಸಕರಾಗಿರುವ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ ಜನರ ಮನಸಿನಲ್ಲೇನಿದೆ ಎಂಬುದು ನಿಗೂಢವಾಗಿದೆ. ಗ್ರಾಮಾಂತರದಲ್ಲಿ ಅವರನ್ನು ಸೋಲಿಸುವವರು ಇಲ್ಲವೇ ಇಲ್ಲ ಎನ್ನುತ್ತಿದ್ದರು ಈಗ ಜನರ ತೀರ್ಪು ಏನೆಂಬುದನ್ನು ಎಲ್ಲರೂ ನೋಡುತ್ತಿದ್ದಾರೆ ಎಂದರು.
ಬಿಎಸ್ವೈ ಅವರಿಂದ ದಾವಣಗೆರೆ ಬಿಜೆಪಿ ಅಭ್ಯರ್ಥಿಗೆ ಸೋಲಾಯಿತು ಎಂಬ ಶಾಸಕ ಬಿ.ಪಿ ಹರೀಶ್ ಹೇಳಿಕೆಗೆ ಈ ರೀತಿಯ ಹೇಳಿಕೆಗಳು ಪಕ್ಷ ಹಾಗೂ ಸಂಘಟನೆಗೆ ಲಾಭವಾಗುವುದಿಲ್ಲ ಎಂದು ಖಾರವಾಗಿ ಹೇಳಿದರು.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…