ರಾಜ್ಯ

ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ

ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.

ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ ಎಂದರು.

ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

2 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

3 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

3 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

4 hours ago