ರಾಜ್ಯ

ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ

ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.

ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ ಎಂದರು.

ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

18 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

18 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

18 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

18 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

18 hours ago