ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.
ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ ಎಂದರು.
ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…