ರಾಜ್ಯ

ವಕ್ಫ್‌ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ: ಶಾಸಕ ರಮೇಶ್‌ ಜಾರಕಿಹೊಳಿ

ಬಳ್ಳಾರಿ: ವಕ್ಫ್‌ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್‌ ಬಣ ಎಂದು ಎಲ್ಲರೂ ಕರೆಯುತ್ತಿದ್ದಾರೆ. ಆದರೆ ನಾವು ಯತ್ನಾಳ್‌ ಬಣವಲ್ಲ. ಇರೋದು ಕೇವಲ ಒಂದೇ ಬಣ, ಅದು ಬಿಜೆಪಿ ಬಣ ಎಂದರು.

ಇನ್ನು ನಾವು ಬಿಜೆಪಿ ಬಣದಿಂದ ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಆದರೆ ಮಾಧ್ಯಮಗಳಲ್ಲಿ ಕೆಲವುಗಳನ್ನು ಬಿಂಬಿಸಲಾಗುತ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ವಕ್ಫ್‌ ಬೋರ್ಡ್‌ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜನವರಿ.4ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡುತ್ತೇವೆ. ಜನವರಿ.6ರಂದು ಕೂಡ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ವಕ್ಫ್‌ ವಿಚಾರದಲ್ಲಿ ಹಿಂದು-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್‌ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಎಂದು ನಾವು ಹೋರಾಟ ಮಾಡುತ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡುತ್ತೇವೆ. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳನ್ನು ಸಹ ಮಾಡುತ್ತೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

5 mins ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

10 mins ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

12 mins ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

17 mins ago

ದ್ವೇಷ ರಾಜಕಾರಣದ ಚಹರೆಗಳು

ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…

22 mins ago

ಬಾ.ನಾ.ಸುಬ್ರಹ್ಮಣ್ಯ ಅವರ ಅಂಕಣ ; ರಾಮಾಯಣದ ರಾವಣ, ಶ್ರೀ ಹನುಮಾನ್‌ ಹನುಮ

ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…

27 mins ago