ರಾಜ್ಯ

ವಕ್ಫ್‌ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ: ಶಾಸಕ ರಮೇಶ್‌ ಜಾರಕಿಹೊಳಿ

ಬಳ್ಳಾರಿ: ವಕ್ಫ್‌ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್‌ ಬಣ ಎಂದು ಎಲ್ಲರೂ ಕರೆಯುತ್ತಿದ್ದಾರೆ. ಆದರೆ ನಾವು ಯತ್ನಾಳ್‌ ಬಣವಲ್ಲ. ಇರೋದು ಕೇವಲ ಒಂದೇ ಬಣ, ಅದು ಬಿಜೆಪಿ ಬಣ ಎಂದರು.

ಇನ್ನು ನಾವು ಬಿಜೆಪಿ ಬಣದಿಂದ ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಆದರೆ ಮಾಧ್ಯಮಗಳಲ್ಲಿ ಕೆಲವುಗಳನ್ನು ಬಿಂಬಿಸಲಾಗುತ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ವಕ್ಫ್‌ ಬೋರ್ಡ್‌ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜನವರಿ.4ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡುತ್ತೇವೆ. ಜನವರಿ.6ರಂದು ಕೂಡ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ವಕ್ಫ್‌ ವಿಚಾರದಲ್ಲಿ ಹಿಂದು-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್‌ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಎಂದು ನಾವು ಹೋರಾಟ ಮಾಡುತ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡುತ್ತೇವೆ. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳನ್ನು ಸಹ ಮಾಡುತ್ತೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

18 mins ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

48 mins ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

2 hours ago

ನಿಯಮ ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…

2 hours ago

ಅಪ್ಪು ಸಿನಿಮಾ ರೀ-ರಿಲೀಸ್‌: ನೆನೆದು ಭಾವುಕರಾದ ರಾಘಣ್ಣ

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌…

2 hours ago

ಕೊಟ್ಟ ಮಾತಿನಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ…

3 hours ago