ಬಳ್ಳಾರಿ: ವಕ್ಫ್ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್ ಬಣ ಎಂದು ಎಲ್ಲರೂ ಕರೆಯುತ್ತಿದ್ದಾರೆ. ಆದರೆ ನಾವು ಯತ್ನಾಳ್ ಬಣವಲ್ಲ. ಇರೋದು ಕೇವಲ ಒಂದೇ ಬಣ, ಅದು ಬಿಜೆಪಿ ಬಣ ಎಂದರು.
ಇನ್ನು ನಾವು ಬಿಜೆಪಿ ಬಣದಿಂದ ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಆದರೆ ಮಾಧ್ಯಮಗಳಲ್ಲಿ ಕೆಲವುಗಳನ್ನು ಬಿಂಬಿಸಲಾಗುತ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜನವರಿ.4ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡುತ್ತೇವೆ. ಜನವರಿ.6ರಂದು ಕೂಡ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ವಕ್ಫ್ ವಿಚಾರದಲ್ಲಿ ಹಿಂದು-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಎಂದು ನಾವು ಹೋರಾಟ ಮಾಡುತ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡುತ್ತೇವೆ. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳನ್ನು ಸಹ ಮಾಡುತ್ತೇವೆ ಎಂದು ತಿಳಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…