ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಅವರ ಮನೆಯಲ್ಲಿ ನಡೆದ ಸಾವಿ ವಿಚಾರವನ್ನು ಹೊರಗೆ ಎಳೆದು ತರುತ್ತೇನೆ ಎಂದು ಕಿಡಿಕಾರಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಪೆನ್ಡ್ರೈವ್ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿರುವ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಹಾಯ ಮರೆತಿದ್ದೀರಿ? ಈ ಎಲ್ಲಾ ದಾಖಲೆಗಳನ್ನು ನಾವು ಹೊರಗೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ಏನೇನು ನಡಯಿತು ಎಂಬುದೆಲ್ಲಾ ಹೊರಗೆ ಬೀಳಲಿದೆ ಎಂದು ಎಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಎಚ್.ಡಿ ರೇವಣ್ಣ ವಿಷಯ ಕೆದಕಿದರೇ ಚರ್ಚೆ ಮಾಡಲು ನಾನು ಸಿದ್ದನಿದ್ದೇನೆ, ಎಲ್ಲಿಗೂ ಪಲಾಯನ ಮಾಡುವುದಿಲ್ಲ. ಈ ವಿಚಾರವಾಗಿ ಕಾಂಗ್ರೆಸ್ ನಾಯಕ ಮಹಾಪರಾಧ ಮಾಡಿದ್ದಾನೆ. ಈ ಪೆನ್ ಡ್ರೈವ್ ವಿಚಾರ ಎಷ್ಟು ತಿಂಗಳ ಹಿಂದೆ ಅವನಿಗೆ ಗೊತ್ತಿತ್ತು. ಅವನಿಗೆ ಪೆನ್ಡ್ರೈವ್ ಸರಬರಾಜು ಮಾಡಿದವರಾರು ಎಲ್ಲವೂ ತಿಳಿದಿದೆ. ಈ ಮಹಾನ್ ನಾಯಕನ ಬಗ್ಗೆಯೂ ಚರ್ಚಿಸೋಣ ಎಂದರು.
ಇನ್ನು ಈ ಪ್ರಕರಣದಲ್ಲಿ ಹಾಸನ ಜಿಲ್ಲಾಧಿಕಾರಿ ಅವರ ಮಾತುಗಳನ್ನು ನಾನು ಗಮನಿಸಿದ್ದು, ರೇವಣ್ಣ ವಿಚಾರದ ಹಿಂದೆ ಸರ್ಕಾರದ ಹುನ್ನಾರ ಅಡಗಿದೆ ಎಂದು ಎಚ್ಡಿಕೆ ಆರೋಪಿಸಿದರು.
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…