ಬೆಂಗಳೂರು : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ಆದ್ರೆ ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ. ಅದು ನಮ್ಮ ಬದ್ಧತೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಎಚ್ಡಿಕೆ, ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ. ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ? ಎಂದೂ ಪ್ರಶ್ನೆ ಮಾಡಿದ್ದಾರೆ.
ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ.
ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜೊತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ? ಎನ್ನುವುದು ನನಗೂ ತಿಳಿದಿದೆ. ಬರದ ಜೊತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು?
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ ಎಂದು ಸರಣಿ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…