ರಾಜ್ಯ

ಮೇಕೆದಾಟು ಯೋಜನೆ ಬೆಂಬಲಿಸೋಣ: ಎಚ್‌.ಡಿ ದೇವೆಗೌಡ!

ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.

ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.

ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.

ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.

ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

22 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

3 hours ago