ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.
ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.
ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.
ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.
ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…