ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.
ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.
ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.
ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.
ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…