ರಾಜ್ಯ

ಮೇಕೆದಾಟು ಯೋಜನೆ ಬೆಂಬಲಿಸೋಣ: ಎಚ್‌.ಡಿ ದೇವೆಗೌಡ!

ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.

ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.

ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.

ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.

ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

12 mins ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

38 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago