ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.
ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.
ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.
ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.
ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…