ರಾಜ್ಯ

ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು: ಗೃಹ ಸಚಿವ

ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ ಪರಮೇಶ್ವರ್‌ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ದುರಾದೃಷ್ಟಕರವಾಗಿ ಹುಬ್ಬಳ್ಳಿಯಲ್ಲೇ ಎರಡು ಕೊಲೆ ಪ್ರಕರಣಗಳು ನಡೆದು ಹೋಗಿವೆ. ಅಂಜಲಿ ಕೊಲೆ ಆರೋಪಿ ಗಿರೀಶ್‌ ಪೊಲೀಸರ ವಶದಲ್ಲಿದ್ದು, ಆರೋಪಿಗೆ ಕಾನೂನಾತ್ಮಕ ಶಿಕ್ಷೆ ನೀಡಲು ಪೊಲೀಸ್‌ ಇಲಾಖೆ ಸಾಕ್ಷ್ಯದಾರಗಳನ್ನು ಕಲೆ ಹಾಕುತ್ತಿದೆ. ಈ ಸಂಬಂಧ ಪ್ರಕರಣವನ್ನು ಇಂದು ಅಥವಾ ನಾಳೆ ಸಿಐಡಿಗೆ ವಹಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದರು.

ಹತ್ಯೆಯಾದ ಅಂಜಲಿಯವರದ್ದು, ಕಡು ಬಡತನದ ಕುಟುಂಬವಾಗಿದೆ. ಈ ಎರಡು ಪ್ರಕರಣಗಳ ಮಾಹಿತಿಯನ್ನು ಬೆಂಗಳೂರಿನಲ್ಲೇ ಇದ್ದುಕೊಂಡು ಸಂಗ್ರಹಿಸುತ್ತಿದ್ದೆ. ಮಾನವೀಯ ದೃಷ್ಠಿಯಿಂದ ಎರಡು ಕುಟುಂಬಗಳ ಮನೆಗೆ ಭೇಟಿ ನೀಡಿದ್ದೇನೆ. ಜತೆಗೆ ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲ ಸೂಚನೆಗಳನ್ನು ನೀಡಬೇಕಿದೆ. ಹಾಗಾಗಿ ಹುಬ್ಬಳ್ಳಿಗೆ ಬಂದಿರುವುದಾಗಿ ಗೃಹ ಸಚಿವರು ತಿಳಿಸಿದರು.

ಇನ್ನು ನೇಹಾ ಹೀರೆಮಠ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಎಂದು ಕೂಗುಗಳು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಪೊಲೀಸ್‌ ಇಲಾಖೆ ಸಮರ್ಥರಿದ್ದಾರೆ, ಹೀಗಾಗಿ ಸಿಬಿಐಗೆ ಕೊಡುವುದಿಲ್ಲ. ಹೊರಗಿನವರಿಂದ ಕೆಲವು ಬಾರಿ ಇಂತಹ ಪ್ರಕರಣಗಳು ತನಿಖೆಯಾಗಬೇಕು ಹಾಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಸಮರ್ಥನೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago