ರಾಜ್ಯ

ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು: ಗೃಹ ಸಚಿವ

ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ ಪರಮೇಶ್ವರ್‌ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ದುರಾದೃಷ್ಟಕರವಾಗಿ ಹುಬ್ಬಳ್ಳಿಯಲ್ಲೇ ಎರಡು ಕೊಲೆ ಪ್ರಕರಣಗಳು ನಡೆದು ಹೋಗಿವೆ. ಅಂಜಲಿ ಕೊಲೆ ಆರೋಪಿ ಗಿರೀಶ್‌ ಪೊಲೀಸರ ವಶದಲ್ಲಿದ್ದು, ಆರೋಪಿಗೆ ಕಾನೂನಾತ್ಮಕ ಶಿಕ್ಷೆ ನೀಡಲು ಪೊಲೀಸ್‌ ಇಲಾಖೆ ಸಾಕ್ಷ್ಯದಾರಗಳನ್ನು ಕಲೆ ಹಾಕುತ್ತಿದೆ. ಈ ಸಂಬಂಧ ಪ್ರಕರಣವನ್ನು ಇಂದು ಅಥವಾ ನಾಳೆ ಸಿಐಡಿಗೆ ವಹಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದರು.

ಹತ್ಯೆಯಾದ ಅಂಜಲಿಯವರದ್ದು, ಕಡು ಬಡತನದ ಕುಟುಂಬವಾಗಿದೆ. ಈ ಎರಡು ಪ್ರಕರಣಗಳ ಮಾಹಿತಿಯನ್ನು ಬೆಂಗಳೂರಿನಲ್ಲೇ ಇದ್ದುಕೊಂಡು ಸಂಗ್ರಹಿಸುತ್ತಿದ್ದೆ. ಮಾನವೀಯ ದೃಷ್ಠಿಯಿಂದ ಎರಡು ಕುಟುಂಬಗಳ ಮನೆಗೆ ಭೇಟಿ ನೀಡಿದ್ದೇನೆ. ಜತೆಗೆ ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲ ಸೂಚನೆಗಳನ್ನು ನೀಡಬೇಕಿದೆ. ಹಾಗಾಗಿ ಹುಬ್ಬಳ್ಳಿಗೆ ಬಂದಿರುವುದಾಗಿ ಗೃಹ ಸಚಿವರು ತಿಳಿಸಿದರು.

ಇನ್ನು ನೇಹಾ ಹೀರೆಮಠ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಎಂದು ಕೂಗುಗಳು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಪೊಲೀಸ್‌ ಇಲಾಖೆ ಸಮರ್ಥರಿದ್ದಾರೆ, ಹೀಗಾಗಿ ಸಿಬಿಐಗೆ ಕೊಡುವುದಿಲ್ಲ. ಹೊರಗಿನವರಿಂದ ಕೆಲವು ಬಾರಿ ಇಂತಹ ಪ್ರಕರಣಗಳು ತನಿಖೆಯಾಗಬೇಕು ಹಾಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಸಮರ್ಥನೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago