ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು ಅವರನ್ನು ಪ್ರಚಾರಕ್ಕೆ ಬಳಸಿಕೊಂಡು ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನು ಗೆಲ್ಲಲ್ಲು ಶ್ರಮಿಸುತ್ತೇವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ತಳ ಹಂತದಿಂದಲೂ ಹೊಂದಾಣಿಕೆ ಆಗಬೇಕು. ಹೀಗಾಗಿ ಎಲ್ಲಾ ಕಡೆಗಳಲ್ಲಿಯೂ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ. ಎಲ್ಲಾ ಅಸಮಧಾನಗಳು ಶಮನವಾಗಿದ್ದು, ನಾವು ಹಾಲು-ಜೇನಿನಂತೆ ಒಗ್ಗೂಡುತ್ತಿದ್ದೇವೆ ಎಂದು ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರ ಜೊತೆಗೆ ಮಾಜಿ ಕ್ರಿಕೇಟಿಗ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಶಿವರಾಮಗೌಡರು ಸಹಾ ಬಿಜೆಪಿ ಸೇರಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…