ಬೆಳಗಾವಿ: ಯತ್ನಾಳ್ ಕಡೆಯಿಂದ ಹೈಕಮಾಂಡ್ಗೆ ಪತ್ರ ಬರೆಸಿ ಪುನಃ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಉಚ್ಛಾಟನೆಯ ಯತ್ನ ಕಳೆದ ಒಂದು ತಿಂಗಳಿನಿಂದಲೂ ನಡೆಯುತ್ತಿತ್ತು. ಇದರ ಬಗ್ಗೆ ನಮಗೆ ಮೊದಲೇ ಸುದ್ದಿ ಬಂದಿತ್ತು ಎಂದು ಹೇಳಿದರು.
ಹೈಕಮಾಂಡ್ ಜೊತೆಗೆ ನಿನ್ನೆ ಮಾತನಾಡಿದ್ದೇನೆ. ಪಕ್ಷಕ್ಕಾಗಿ ಯತ್ನಾಳ್ ನ್ಯಾಯಯುತವಾಗಿ ದುಡಿದಿದ್ದಾರೆ. ಇದು ವಿರೋಧಿ ಬಣಕ್ಕೂ ಎಚ್ಚರಿಕೆಯ ಗಂಟೆಯಾಗಿದ್ದು, ಯತ್ನಾಳ್ ಮತ್ತೆ ಬಿಜೆಪಿಗೆ ವಾಪಸ್ ಬರುತ್ತಾರೆ ಎಂದರು.
ಯತ್ನಾಳ್ ಉಚ್ಛಾಟನೆಯಾಗಲು ಯಾರ ಕೈವಾಡವಿದೆ ಎಂದು ಹೇಳುವುದಿಲ್ಲ. ಯತ್ನಾಳ್ ಅವರು ಒಂಟಿಯಾಗಿಲ್ಲ. ಅವರ ಜೊತೆ ಹಾಗೂ ಅವರ ಪರ ನಾವೆಲ್ಲಾ ಇದ್ದೇವೆ ಎಂದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…