ಬೆಳಗಾವಿ: ಯತ್ನಾಳ್ ಕಡೆಯಿಂದ ಹೈಕಮಾಂಡ್ಗೆ ಪತ್ರ ಬರೆಸಿ ಪುನಃ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಉಚ್ಛಾಟನೆಯ ಯತ್ನ ಕಳೆದ ಒಂದು ತಿಂಗಳಿನಿಂದಲೂ ನಡೆಯುತ್ತಿತ್ತು. ಇದರ ಬಗ್ಗೆ ನಮಗೆ ಮೊದಲೇ ಸುದ್ದಿ ಬಂದಿತ್ತು ಎಂದು ಹೇಳಿದರು.
ಹೈಕಮಾಂಡ್ ಜೊತೆಗೆ ನಿನ್ನೆ ಮಾತನಾಡಿದ್ದೇನೆ. ಪಕ್ಷಕ್ಕಾಗಿ ಯತ್ನಾಳ್ ನ್ಯಾಯಯುತವಾಗಿ ದುಡಿದಿದ್ದಾರೆ. ಇದು ವಿರೋಧಿ ಬಣಕ್ಕೂ ಎಚ್ಚರಿಕೆಯ ಗಂಟೆಯಾಗಿದ್ದು, ಯತ್ನಾಳ್ ಮತ್ತೆ ಬಿಜೆಪಿಗೆ ವಾಪಸ್ ಬರುತ್ತಾರೆ ಎಂದರು.
ಯತ್ನಾಳ್ ಉಚ್ಛಾಟನೆಯಾಗಲು ಯಾರ ಕೈವಾಡವಿದೆ ಎಂದು ಹೇಳುವುದಿಲ್ಲ. ಯತ್ನಾಳ್ ಅವರು ಒಂಟಿಯಾಗಿಲ್ಲ. ಅವರ ಜೊತೆ ಹಾಗೂ ಅವರ ಪರ ನಾವೆಲ್ಲಾ ಇದ್ದೇವೆ ಎಂದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…