Mysore
28
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೋರಿ ಪತ್ರ ಬರೆದಿದ್ದೆವು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್‌.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ಎಂದಿರುವ ಸಿಎಂ ಸಿದ್ದರಾಮಯ್ಯ, ತಾವು ಈ ಹಿಂದೆ ಬಿಜೆಪಿ ಸರ್ಕಾರಕ್ಕೆ ಸಿದ್ದಗಂಗಾ ಸ್ವಾಮಿಜಿಗಳಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿರುವ ಬಗ್ಗೆ ಉಲ್ಲೇಖಿಸಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ನಡೆಯುತ್ತಿರುವ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.

ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೇಳಿರುವ ಬಗ್ಗೆ, ಅವರು ಕೇಳಲಿ ಬಿಡಿ. ಅವರು ಆಕಾಂಕ್ಷಿ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಯಾರಿಗೆ ನೀಡಬೇಕು ಅಂತಾ ನಿರ್ಧಾರ ಮಾಡ್ತೀವಿ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!