ಬೆಂಗಳೂರು: ಅಮಿತ್ ಶಾರವರ ಕರ್ನಾಟಕ ರಾಜ್ಯ ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯವರ ಹೆಗಲ ಮೇಲೆ ಕೇಸರಿ ಶಾಲು ಹೋಯ್ತು, ನೀಲಿ ಶಾಲು ಬಂತು. ನನಗೆ ಇದೊಂದು ವಿಶೇಷ ವಿಸ್ಮಯದಂತೆ ಭಾಸವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜೈ ಭೀಮ್ ಎನ್ನುವುದು ಫ್ಯಾಷನ್ ಎಂದಿದ್ದ ಅಮಿತ್ ಶಾವರ ಬಿಜೆಪಿಗೆ, ನೀಲಿ ಶಾಲು ಧರಿಸುವುದು ಈಗ ಹೊಸ “ಫ್ಯಾಷನ್“ ಆಗಿದೆಯೇ?, ಕೇಸರಿ ಶಾಲಿನ ಮೇಲೆ ಬಿಜೆಪಿಗರಿಗೆ ಅಸಹನೆ ಉಂಟಾಗಿದೆಯೇ? ಅಥವಾ ಕೇಸರಿ ಶಾಲು ಕಂಡರೆ ನಿರ್ಲಕ್ಷ್ಯವೇ? ಎಂದು ಪ್ರಶ್ನಿಸಿದ್ದಾರೆ.
ಕೇಸರಿ ಶಾಲಿನಿಂದ ಸಂವಿಧಾನದ ಅನುಯಾಯಿಗಳನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವುದು ಕರ್ನಾಟಕ ರಾಜ್ಯ ಬಿಜೆಪಿಗೆ ಅರ್ಥವಾದಂತಿದೆ ಎಂದು ಹೇಳಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…