ಬೆಂಗಳೂರು: ಅಮಿತ್ ಶಾರವರ ಕರ್ನಾಟಕ ರಾಜ್ಯ ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯವರ ಹೆಗಲ ಮೇಲೆ ಕೇಸರಿ ಶಾಲು ಹೋಯ್ತು, ನೀಲಿ ಶಾಲು ಬಂತು. ನನಗೆ ಇದೊಂದು ವಿಶೇಷ ವಿಸ್ಮಯದಂತೆ ಭಾಸವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜೈ ಭೀಮ್ ಎನ್ನುವುದು ಫ್ಯಾಷನ್ ಎಂದಿದ್ದ ಅಮಿತ್ ಶಾವರ ಬಿಜೆಪಿಗೆ, ನೀಲಿ ಶಾಲು ಧರಿಸುವುದು ಈಗ ಹೊಸ “ಫ್ಯಾಷನ್“ ಆಗಿದೆಯೇ?, ಕೇಸರಿ ಶಾಲಿನ ಮೇಲೆ ಬಿಜೆಪಿಗರಿಗೆ ಅಸಹನೆ ಉಂಟಾಗಿದೆಯೇ? ಅಥವಾ ಕೇಸರಿ ಶಾಲು ಕಂಡರೆ ನಿರ್ಲಕ್ಷ್ಯವೇ? ಎಂದು ಪ್ರಶ್ನಿಸಿದ್ದಾರೆ.
ಕೇಸರಿ ಶಾಲಿನಿಂದ ಸಂವಿಧಾನದ ಅನುಯಾಯಿಗಳನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವುದು ಕರ್ನಾಟಕ ರಾಜ್ಯ ಬಿಜೆಪಿಗೆ ಅರ್ಥವಾದಂತಿದೆ ಎಂದು ಹೇಳಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…