ರಾಜ್ಯ

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಕಡಲ ತೀರದಲ್ಲಿ ಕಟ್ಟೆಚ್ಚರ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್‌ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.

ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಣೆ ಮಾಡಿದ್ದು, ಸಮುದ್ರದ ಬಳಿ ಯಾರೂ ತೆರಳದಂತೆ ಸೂಚನೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ರಕ್ಷಣೆಗೆ ಲೈಫ್‌ ಗಾರ್ಡ್‌, ಹೋಂ ಗಾರ್ಡ್‌ಗಳನ್ನು ನೇಮಕ ಮಾಡಲಾಗಿದೆ. ಕಡಲ ತೀರಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು, ಸ್ಥಳೀಯರು, ಪ್ರವಾಸಿಗರು ಯಾರೂ ಸಮುದ್ರ ತೀರಕ್ಕೆ ಹೋಗಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

1 hour ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

3 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

7 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

7 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

7 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

7 hours ago