weather rain alert karnataka
ಬೆಂಗಳೂರು: ರಾಜ್ಯದಲ್ಲಿ ಜೂನ್. 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.26ರ ನಂತರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವಂತೆ ಶಾಲಾ ಆಡಳಿತ ಮಂಡಳಿ ಸೂಚನೆ ನೀಡಿವೆ.
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ್ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…