ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ.
ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬರ ಆವರಿಸಿದ್ದ ಕಾರಣಕ್ಕೆ ಬಿತ್ತನೆ ಬೀಜಗಳ ಉತ್ಪಾದನೆ ಕುಂಠಿತವಾಗಿ ಬೆಲೆಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದವು. ಇದರಿಂದ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದರೆ ಈ ಬಾರಿ ಗಣನೀಯವಾಗಿ ಬಿತ್ತನೆ ಬೀಜಗಳ ದರವನ್ನು ಇಳಿಕೆ ಮಾಡಲಾಗಿದೆ.
ಹೆಸರು ಕಾಳು ಕೆಜಿಗೆ 186 ರೂನಿಂದ 140ರೂಗೆ ಇಳಿಕೆಯಾಗಿದೆ. ಕಡಲೆ ಬೀಜ 102 ರೂನಿಂದ 99ರೂ, ಸಿರಿಧಾನ್ಯಗಳು 117ರೂನಿಂದ 69 ರೂ, ತೊಗರಿ 178 ರೂ ನಿಂದ 142ರೂ, ಸೂರ್ಯಕಾಂತಿ 842ರೂನಿಂದ 770ರೂ, ಸೋಯಾಬೀನ್ 77 ರೀ 75ರೂ, ಉದ್ದಿನಕಾಳು 157ರೂನಿಂದ 138ರೂ, ಬಟಾಣಿ 135 ರೂನಿಂದ 130ರೂಗೆ ಇಳಿಕೆಯಾಗಿದೆ.
ನವಣೆ, ಊದಲು ದರ ಕೆಜಿಗೆ 117 ರೂನಿಂದ 69.60ರೂಗೆ ಇಳಿಕೆಯಾಗಿದೆ. ಇನ್ನು ನಾನಾ ವಿಧದ ಭತ್ತದ ದರ ಕಳೆದ ವರ್ಷ ಕೆಜಿಗೆ 40 ರೂನಿಂದ 69ರೂಗೆ ಇಳಿಕೆಯಾಗಿದೆ. ನಾನಾ ವಿಧದ ಭತ್ತದ ತಳಿಗಳ ದರ ಕಳೆದ ವರ್ಷ ಕೆಜಿಗೆ 40ರಿಂದ 45ರೂವರೆಗೆ ಇತ್ತು. ಈ ಬಾರಿ 40 ರೂನಿಂದ ಗರಿಷ್ಠ 49 ರೂಪಾಯಿವರೆಗೆ ಇದೆ.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…