Categories: ರಾಜ್ಯ

ಮುಂಗಾರು ಹಂಗಾಮಿಗೆ ಅನ್ನದಾತರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ.

ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬರ ಆವರಿಸಿದ್ದ ಕಾರಣಕ್ಕೆ ಬಿತ್ತನೆ ಬೀಜಗಳ ಉತ್ಪಾದನೆ ಕುಂಠಿತವಾಗಿ ಬೆಲೆಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದವು. ಇದರಿಂದ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದರೆ ಈ ಬಾರಿ ಗಣನೀಯವಾಗಿ ಬಿತ್ತನೆ ಬೀಜಗಳ ದರವನ್ನು ಇಳಿಕೆ ಮಾಡಲಾಗಿದೆ.

ಹೆಸರು ಕಾಳು ಕೆಜಿಗೆ 186 ರೂನಿಂದ 140ರೂಗೆ ಇಳಿಕೆಯಾಗಿದೆ. ಕಡಲೆ ಬೀಜ 102 ರೂನಿಂದ 99ರೂ, ಸಿರಿಧಾನ್ಯಗಳು 117ರೂನಿಂದ 69 ರೂ, ತೊಗರಿ 178 ರೂ ನಿಂದ 142ರೂ, ಸೂರ್ಯಕಾಂತಿ 842ರೂನಿಂದ 770ರೂ, ಸೋಯಾಬೀನ್‌ 77 ರೀ 75ರೂ, ಉದ್ದಿನಕಾಳು 157ರೂನಿಂದ 138ರೂ, ಬಟಾಣಿ 135 ರೂನಿಂದ 130ರೂಗೆ ಇಳಿಕೆಯಾಗಿದೆ.

ನವಣೆ, ಊದಲು ದರ ಕೆಜಿಗೆ 117 ರೂನಿಂದ 69.60ರೂಗೆ ಇಳಿಕೆಯಾಗಿದೆ. ಇನ್ನು ನಾನಾ ವಿಧದ ಭತ್ತದ ದರ ಕಳೆದ ವರ್ಷ ಕೆಜಿಗೆ 40 ರೂನಿಂದ 69ರೂಗೆ ಇಳಿಕೆಯಾಗಿದೆ. ನಾನಾ ವಿಧದ ಭತ್ತದ ತಳಿಗಳ ದರ ಕಳೆದ ವರ್ಷ ಕೆಜಿಗೆ 40ರಿಂದ 45ರೂವರೆಗೆ ಇತ್ತು. ಈ ಬಾರಿ 40 ರೂನಿಂದ ಗರಿಷ್ಠ 49 ರೂಪಾಯಿವರೆಗೆ ಇದೆ.

ಆಂದೋಲನ ಡೆಸ್ಕ್

Recent Posts

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

20 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

57 mins ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

2 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

2 hours ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

2 hours ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

3 hours ago