ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ.
ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬರ ಆವರಿಸಿದ್ದ ಕಾರಣಕ್ಕೆ ಬಿತ್ತನೆ ಬೀಜಗಳ ಉತ್ಪಾದನೆ ಕುಂಠಿತವಾಗಿ ಬೆಲೆಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದವು. ಇದರಿಂದ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದರೆ ಈ ಬಾರಿ ಗಣನೀಯವಾಗಿ ಬಿತ್ತನೆ ಬೀಜಗಳ ದರವನ್ನು ಇಳಿಕೆ ಮಾಡಲಾಗಿದೆ.
ಹೆಸರು ಕಾಳು ಕೆಜಿಗೆ 186 ರೂನಿಂದ 140ರೂಗೆ ಇಳಿಕೆಯಾಗಿದೆ. ಕಡಲೆ ಬೀಜ 102 ರೂನಿಂದ 99ರೂ, ಸಿರಿಧಾನ್ಯಗಳು 117ರೂನಿಂದ 69 ರೂ, ತೊಗರಿ 178 ರೂ ನಿಂದ 142ರೂ, ಸೂರ್ಯಕಾಂತಿ 842ರೂನಿಂದ 770ರೂ, ಸೋಯಾಬೀನ್ 77 ರೀ 75ರೂ, ಉದ್ದಿನಕಾಳು 157ರೂನಿಂದ 138ರೂ, ಬಟಾಣಿ 135 ರೂನಿಂದ 130ರೂಗೆ ಇಳಿಕೆಯಾಗಿದೆ.
ನವಣೆ, ಊದಲು ದರ ಕೆಜಿಗೆ 117 ರೂನಿಂದ 69.60ರೂಗೆ ಇಳಿಕೆಯಾಗಿದೆ. ಇನ್ನು ನಾನಾ ವಿಧದ ಭತ್ತದ ದರ ಕಳೆದ ವರ್ಷ ಕೆಜಿಗೆ 40 ರೂನಿಂದ 69ರೂಗೆ ಇಳಿಕೆಯಾಗಿದೆ. ನಾನಾ ವಿಧದ ಭತ್ತದ ತಳಿಗಳ ದರ ಕಳೆದ ವರ್ಷ ಕೆಜಿಗೆ 40ರಿಂದ 45ರೂವರೆಗೆ ಇತ್ತು. ಈ ಬಾರಿ 40 ರೂನಿಂದ ಗರಿಷ್ಠ 49 ರೂಪಾಯಿವರೆಗೆ ಇದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…