ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ.
ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬರ ಆವರಿಸಿದ್ದ ಕಾರಣಕ್ಕೆ ಬಿತ್ತನೆ ಬೀಜಗಳ ಉತ್ಪಾದನೆ ಕುಂಠಿತವಾಗಿ ಬೆಲೆಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದವು. ಇದರಿಂದ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದರೆ ಈ ಬಾರಿ ಗಣನೀಯವಾಗಿ ಬಿತ್ತನೆ ಬೀಜಗಳ ದರವನ್ನು ಇಳಿಕೆ ಮಾಡಲಾಗಿದೆ.
ಹೆಸರು ಕಾಳು ಕೆಜಿಗೆ 186 ರೂನಿಂದ 140ರೂಗೆ ಇಳಿಕೆಯಾಗಿದೆ. ಕಡಲೆ ಬೀಜ 102 ರೂನಿಂದ 99ರೂ, ಸಿರಿಧಾನ್ಯಗಳು 117ರೂನಿಂದ 69 ರೂ, ತೊಗರಿ 178 ರೂ ನಿಂದ 142ರೂ, ಸೂರ್ಯಕಾಂತಿ 842ರೂನಿಂದ 770ರೂ, ಸೋಯಾಬೀನ್ 77 ರೀ 75ರೂ, ಉದ್ದಿನಕಾಳು 157ರೂನಿಂದ 138ರೂ, ಬಟಾಣಿ 135 ರೂನಿಂದ 130ರೂಗೆ ಇಳಿಕೆಯಾಗಿದೆ.
ನವಣೆ, ಊದಲು ದರ ಕೆಜಿಗೆ 117 ರೂನಿಂದ 69.60ರೂಗೆ ಇಳಿಕೆಯಾಗಿದೆ. ಇನ್ನು ನಾನಾ ವಿಧದ ಭತ್ತದ ದರ ಕಳೆದ ವರ್ಷ ಕೆಜಿಗೆ 40 ರೂನಿಂದ 69ರೂಗೆ ಇಳಿಕೆಯಾಗಿದೆ. ನಾನಾ ವಿಧದ ಭತ್ತದ ತಳಿಗಳ ದರ ಕಳೆದ ವರ್ಷ ಕೆಜಿಗೆ 40ರಿಂದ 45ರೂವರೆಗೆ ಇತ್ತು. ಈ ಬಾರಿ 40 ರೂನಿಂದ ಗರಿಷ್ಠ 49 ರೂಪಾಯಿವರೆಗೆ ಇದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…