ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ.
ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬರ ಆವರಿಸಿದ್ದ ಕಾರಣಕ್ಕೆ ಬಿತ್ತನೆ ಬೀಜಗಳ ಉತ್ಪಾದನೆ ಕುಂಠಿತವಾಗಿ ಬೆಲೆಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದವು. ಇದರಿಂದ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟಿತ್ತು. ಆದರೆ ಈ ಬಾರಿ ಗಣನೀಯವಾಗಿ ಬಿತ್ತನೆ ಬೀಜಗಳ ದರವನ್ನು ಇಳಿಕೆ ಮಾಡಲಾಗಿದೆ.
ಹೆಸರು ಕಾಳು ಕೆಜಿಗೆ 186 ರೂನಿಂದ 140ರೂಗೆ ಇಳಿಕೆಯಾಗಿದೆ. ಕಡಲೆ ಬೀಜ 102 ರೂನಿಂದ 99ರೂ, ಸಿರಿಧಾನ್ಯಗಳು 117ರೂನಿಂದ 69 ರೂ, ತೊಗರಿ 178 ರೂ ನಿಂದ 142ರೂ, ಸೂರ್ಯಕಾಂತಿ 842ರೂನಿಂದ 770ರೂ, ಸೋಯಾಬೀನ್ 77 ರೀ 75ರೂ, ಉದ್ದಿನಕಾಳು 157ರೂನಿಂದ 138ರೂ, ಬಟಾಣಿ 135 ರೂನಿಂದ 130ರೂಗೆ ಇಳಿಕೆಯಾಗಿದೆ.
ನವಣೆ, ಊದಲು ದರ ಕೆಜಿಗೆ 117 ರೂನಿಂದ 69.60ರೂಗೆ ಇಳಿಕೆಯಾಗಿದೆ. ಇನ್ನು ನಾನಾ ವಿಧದ ಭತ್ತದ ದರ ಕಳೆದ ವರ್ಷ ಕೆಜಿಗೆ 40 ರೂನಿಂದ 69ರೂಗೆ ಇಳಿಕೆಯಾಗಿದೆ. ನಾನಾ ವಿಧದ ಭತ್ತದ ತಳಿಗಳ ದರ ಕಳೆದ ವರ್ಷ ಕೆಜಿಗೆ 40ರಿಂದ 45ರೂವರೆಗೆ ಇತ್ತು. ಈ ಬಾರಿ 40 ರೂನಿಂದ ಗರಿಷ್ಠ 49 ರೂಪಾಯಿವರೆಗೆ ಇದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…