ಕನಕಪುರ(ರಾಮನಗರ ಜಿಲ್ಲೆ): ಮದುವೆಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಸಮೀಪ ನಡೆದಿದೆ.
ಗಾಯಾಳುಗಳನ್ನು ಕನಕಪುರದ ಐಪಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಗಡೇಗೌಡನದೊಡ್ಡಿ ಗ್ರಾಮದ ಗಂಡು ಮತ್ತು ಹೆಣ್ಣಿನ ಮದುವೆಯನ್ನು ಮಡಿವಾಳದಲ್ಲಿ ಆಯೋಜಿಸಲಾಗಿತ್ತು. ಹೀಗಾಗಿ, ಬೆಳಿಗ್ಗೆಯ ಎರಡು ಖಾಸಗಿ ಬಸ್ಗಳಲ್ಲಿ ಗ್ರಾಮದ ಜನರು ಮದುವೆಗೆ ಹೊರಟಿದ್ದರು.
ಒಂದು ಬಸ್ ಸಂಗಮ ಸಮೀಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದರು.
ಗಾಯಳು ಆರೋಗ್ಯ ವಿಚಾರಿಸಿ ಮಾಜಿ ಸಂಸದ ಡಿಕೆ ಸುರೇಶ್
ಗಾಯಾಳುಗಳನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಂಸದ ಡಿಕೆ ಸುರೇಶ್ , ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ಮದುವೆಯ ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲಿ ಈ ರೀತಿಯ ಆಘಾತವುಂಟಾಗಿರುವುದು ದುಃಖದ ವಿಚಾರ. ಆದಷ್ಟು ಬೇಗ ಎಲ್ಲರೂ ಗುಣಮುಖರಾಗಲಿ ಎಂದು ಹಾರೈಸಿ, ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…